ಗದಗ ಆಗಷ್ಟ 13 : ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮಾರಕಾಸ್ತ್ರ ಗಳಿಂದ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
ಲಕ್ಕುಂಡಿ ಗ್ರಾಮದ ನಿವಾಸಿ ಕಾಶೀಮಸಾಬ ಗಬ್ಬರಸಾಬ ಹಮ್ಮಸಾಗರ (51) ಕೊಲೆಯಾದ ದುರ್ದೈವಿ ಎಂದು ತಿಳಿದು ಬಂದಿದೆ.
ಮಂಗಳವಾರ ಸಂಜೆ 7.30 ಗಂಟೆಗೆ ಸುಮಾರಿಗೆ ಲಕ್ಕುಂಡಿ ಗ್ರಾಮದ ತಾಡಪತ್ರಿ ಓಣೆಯಲ್ಲಿ ಈ ಘಟನೆ ನಡೆದಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತ ದೇಹವನ್ನು ಗದಗ ಜಿಮ್ಸ್ ಗೆ ರವಾನಿಸಲಾಗಿದೆ.
ಸ್ಥಳಕ್ಕೆ ಗದಗ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ.ಬಿ ಎಸ್.ನೇಮಗೌಡ, ಗದಗ ಉಪ ವಿಭಾಗದ ಇನ್ಸ್ಪೆಕ್ಟರ್ ಇನಾಮದಾರ ಸಾಹೇಬರು, ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸಂಗಮೇಶ ಶಿವಯೋಗಿ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ…