ಗದಗ : ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ದಿಂಡೂರ ಕ್ರಾಸ್ ನಲ್ಲಿ ಕೆ ಎಸ್ ಆರ್ ಟಿ ಎಸ್ ಬಸ್ ಹರಿದು 31 ಕುರಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಗಜೇಂದ್ರಗಡದಿಂದ ಬದಾಮಿ ಕಡೆಗೆ ಹೊರಟಿದ್ದ ಕೆಎಸ್ ಆರ್ ಟಿಸಿ ಬಸ್ ಮಾರ್ಗ ಮಧ್ಯದ ದಿಂಡೂರ ಕ್ರಾಸ್ ಬಳಿ ಸಂಚಾರಿಸುತ್ತಿದ್ದ ಕುರಿಗಳ ಗುಂಪಿನ ಮೇಲೆ ಹಾಯ್ದ ಪರಿಣಾಮ 31 ಕುರಿಗಳು ಸಾವನ್ನಪ್ಪಿವೆ.
ರೋಣ ತಾಲೂಕಿನ ಹಿರೇಹಾಳ ಗ್ರಾಮದ ಅಪ್ಪಣ್ಣ ಎಂಬುವವರಿಗೆ ಸೇರಿದ್ದ ಕುರಿಗಳು ಎಂದು ತಿಳಿದು ಬಂದಿದ್ದು, ಘಟನಾ ಸ್ಥಳಕ್ಕೆ ಗಜೇಂದ್ರಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.