ಗದಗ : ಪೊಲೀಸ್ ಸಿಬ್ಬಂದಿ ಕರ್ತವ್ಯದಲ್ಲಿರುವಾಗಲೇ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ಧಾರವಾಡದ ಕೋರ್ಟ್ ಬಳಿ ಜರುಗಿದೆ.
ಗದಗ ಸಶಸ್ತ್ರ ಮೀಸಲು ಪಡೆ ಪೊಲೀಸ್ ವಾಹನ ಚಾಲಕರಾಗಿ ಕೆಲಸ ಮಾಡುತ್ತಿದ್ದ ಬಸವರಾಜ ವಿಠ್ಠಲಾಪುರ ಸಾವನ್ನಪ್ಪಿದ ದುರ್ದೈವಿ.
ಗದಗನಿಂದ ಧಾರವಾಡಕ್ಕೆ ಕೈದಿ ವರ್ಗಾವಣೆ ಮಾಡುವಾಗ ಇವರಿಗೆ ಹೃದಯಾಘಾತ ಸಂಭವಿಸಿದೆ. ವಾಹನ ಚಾಲನೆ ಮಾಡುವಾಗಲೇ ಎದೆನೋವು ಕಾಣಿಸಿಕೊಂಡಿದೆ.
ತಕ್ಷಣ ರಸ್ತೆ ಪಕ್ಕಕ್ಕೆ ಚಾಲಕ ಬಸವರಾಜ ವಾಹನ ನಿಲ್ಲಿಸಿದರು. ಕ್ಷಣಮಾತ್ರದಲ್ಲೇ ಹೃದಯಾಘಾತವಾಗಿ ಬಸವರಾಜ ಸಾವನ್ನಪ್ಪಿದ್ದಾರೆ. ಬಸವರಾಜ ಅವರ ನಿಧನಕ್ಕೆ ಗದಗ ಜಿಲ್ಲಾ ಪೊಲೀಸ್ ಇಲಾಖೆ ಸಂತಾಪ ಸೂಚಿಸಿದೆ.