ಗದಗ ಸೆಪ್ಟೆಂಬರ್ 4 : ಅಪರ ಪೊಲೀಸ್ ಮಹಾ ನಿರ್ದೇಶಕರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರು ರವರ ನಿರ್ದೇಶನದಂತೆ ಕರ್ನಾಟಕ ಲೋಕಾಯುಕ್ತ, ಗದಗ ಕಛೇರಿಯ ಪೊಲೀಸ್ ಅಧಿಕಾರಿಗಳು ಸೆಪ್ಟೆಂಬರ್ 11 ರಂದು ಲೋಕಾಯುಕ್ತ ಜನಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸದರಿ ದಿನಾಂಕದಂದು ಸಾರ್ವಜನಿಕರಿಂದ ದೂರು/ಅಹವಾಲುಗಳನ್ನು ಸ್ವೀಕರಿಸಲಾಗುವುದು.
ಸೆ.11 ರಂದು ಬೆ10.30 ರಿಂದ ಮ 1 ಗಂಟೆಯವರೆಗೆ ಮುಂಡರಗಿ ತಹಶೀಲ್ದಾರ ಕಛೇರಿ ಸಭಾ ಭವನದಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ವಿಜಯ ಬಿರಾದಾರ, ಸೆ.11 ರಂದು ಬೆ. 10.30 ರಿಮದ ಮ 1 ಗಂಟೆಯವರೆಗೆ ಶಿರಹಟ್ಟಿ ತಹಶೀಲ್ದಾರ ಕಛೇರಿ ಸಭಾಭವನದಲ್ಲಿ, ಪೊಲೀಸ್ ಇನ್ಸಪೆಕ್ಟರ್ ರವಿ ಪುರುಷೋತ್ತಮ ಹಾಗೂ ಪೊಲಿಸ್ ಇನ್ಸಪೆಕ್ಟರ್ ಶ್ರಿಮತಿ ಶಾವುಬಾಯಿ ಎಸ್. ತೇಲಿ ಅವರು ಸಾರ್ವಜನಿಕರಿಂದ ದೂರು ಅಹವಾಲು ಸ್ವೀಕರಿಸಲಿದ್ದಾರೆ ಎಂದು ಕರ್ನಾಟಕ ಲೊಕಾಯುಕ್ತ ಗದಗ ಕಚೇರಿಯ ಪ್ರಕಟಣೆ ತಿಳಿಸಿದೆ.