ಗದಗ ಸೆಪ್ಟೆಂಬರ್ 5: ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಸೆಪ್ಟೆಂಬರ್ 6 ರಿಂದ 8 ರವರೆಗೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ವಿವರ ಕೆಳಗಿನಂತಿದೆ.
ಸೆಪ್ಟೆAಬರ್ 6 ರಂದು ಬೆಳಿಗ್ಗೆ 10 ಗಂಟೆಗೆ ನಗರದ ದಿ.ಗದಗ ಕೋ ಆಪ್ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಹೆಸರು ಬೆಂಬಲ ಬೆಲೆಯ ಖರೀದಿ ಕೇಂದ್ರ ಪ್ರಾರಂಭಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬೆ.11ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳೊದಿಗೆ ಸಭೆ ನಡೆಸುವರು. ಮಧ್ಯಾಹ್ನ 12 ಗಂಟೆಗೆ ವಿಕಲಚೇತನರ ಕಲ್ಯಾಣ ಇಲಾಖೆಯವರೊಂದಿಗೆ ಸಭೆ ಜರುಗಿಸುವರು. ಸಂಜೆ 6 ಗಂಟೆಗೆ ನಗರದ ದಿ. ಗದಗ ಕೋ ಆಪ್ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಶಾಸಕರ ಕಚೇರಿಯಲ್ಲಿ ಸಭೆ ಜರುಗಿಸುವರು ಮತ್ತು ವಾಸ್ತವ್ಯ ಮಾಡುವರು.
ಸೆಪ್ಟೆಂಬರ್ 7ರಂದು ಮಧ್ಯಾಹ್ನ 12 ಗಂಟೆಗೆ ಹುಲಕೋಟಿಯ ವಿವೇಕಾನಂದ ವಿಜ್ಞಾನ ಕಾಲೇಜಿನ ಆಡಿಟೋರಿಯಂ ಹಾಲ್ದಲ್ಲಿ ಶತಮಾನೋತ್ಸವ ಕಾರ್ಯಕ್ರಮದ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು. ನಂತರ ಗಣೇಶ ಚತುರ್ಥಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಸ್ತವ್ಯ ಮಾಡುವರು. ಸೆಪ್ಟೆಂಬರ್ 8 ರಂದು ಬೆ 9.30 ಗಂಟೆಗೆ ಲಕ್ಕುಂಡಿ ಪಾರಂಪರಿಕ ಪ್ರದೇಶ ಪ್ರಾಧಿಕಾರದ 13 ಆರಕ್ಷಿತ ಸ್ಮಾರಕಗಳ ಸಂರಕ್ಷಣಾ ಮತ್ತು ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12.30 ಗಂಟೆಗೆ ಅಣ್ಣಿಗೇರಿ ತಾಲೂಕಿನ ಮಣಕವಾಡಕ್ಕೆ ತೆರಳಿ ಅಲ್ಲಿಂದ ಹುಬ್ಬಳ್ಳಿ ಮೂಲಕ ಬೆಂಗಳೂರಿಗೆ ಪ್ರಯಾಣ ಮಾಡುವರು.