14.4 C
New York
Friday, May 9, 2025

Buy now

spot_img

ಗದಗ : ಶಾಲಾ ಕಾಲೇಜು ವಿದ್ಯಾರ್ಥಿಗಳು, ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮಾನವ ಸರಪಳಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ : ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಮಹತ್ವದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು

ಗದಗ ಸೆಪ್ಟೆಂಬರ್ 10 : ಇದೇ ಸೆಪ್ಟೆಂಬರ್15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಹಮ್ಮಿಕೊಳ್ಳುವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ, ಅಚ್ಚುಕಟ್ಟಾಗಿ ಹಮ್ಮಿಕೊಂಡು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಕೆಸ್ವಾನ್ ಹಾಲ್ ನಲ್ಲಿ ಮಂಗಳವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸೆಪ್ಟೆಂಬರ್ 15 ಮುಂಜಾನೆ 9 ಗಂಟೆಗೆ ಹಾವೇರಿಯ ಬಾಳೆಹೊಸುರು ದಿಂದ ಕೊಪ್ಪಳ ವರೆಗೆ ಏಕಕಾಲಕ್ಕೆ ಮಾನವ ಸರಪಳಿ ಕಾರ್ಯಕ್ರಮ ಜರಗುತ್ತಿದ್ದು ಗದಗ ಜಿಲ್ಲೆಯ ಶಿರಹಟ್ಟಿ, ಲಕ್ಷ್ಮೇಶ್ವರ, ಮುಂಡರಗಿ ತಾಲೂಕಿನಲ್ಲಿ ಮಾನವ ಸರಪಳಿ ಹಾದು ಹೋಗುತ್ತಿದ್ದು ಪ್ರತಿ ಕಿಲೋ ಮೀಟರ್ ಗೆ ಒಬ್ಬರು ನೂಡಲ್ ಅಧಿಕಾರಿಯನ್ನು ನೇಮಿಸಿ, ಮುಖ್ಯ ವೃತ್ತಗಳಲ್ಲಿ ತೋರಣ ,ಬ್ಯಾನರ್ ಹಾಕಿಸಿ ಮಾನವ ಸರಪಳಿ ನಿರ್ಮಿಸಿ 100 ಮೀಟರ್ ವ್ಯಾಪ್ತಿಯಲ್ಲಿ ಜನರನ್ನು ಸೇರಿಸಿ ಸಂವಿಧಾನದ ಪೀಠಿಕೆ ಓದಿಸಿ, ರಾಷ್ಟ್ರಗೀತೆ ಯನ್ನು ಹಾಡಿಸಬೇಕು ಎಂದು ಹೇಳಿದರು.

ತಾಲೂಕಿನ ತಹಶಿಲ್ದಾರರು ಮತ್ತು ತಾ.ಪಂ ಕಾರ್ಯನಿರ್ವಾಹಕರು ಒಳಗೊಂಡು ಸಂಪೂರ್ಣ ಯೋಜನೆ ಜೊತೆಗೆ ಸೂಕ್ಷ್ಮ ಯೋಜನೆ ತಯಾರಿಸಿ ಮಾನವ ಸರಪಳಿ ಹಾದುಹೋಗುವ ಗ್ರಾಮ ಸೇರಿದಂತೆ,10 ಕಿಲೋ ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಗ್ರಾಮ ಸಭೆಯನ್ನು ನಡೆಸಿ ಮತ್ತು ಗ್ರಾಮದ ಶಾಲೆಗಳಲ್ಲಿ ಸಭೆಯನ್ನು ನಡೆಸಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರು, ಅಧಿಕಾರಿ, ಸಿಬ್ಬಂದಿಗಳು ಈ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಆಯಾ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಸೀಲ್ದಾರರು, ಪಿಡಿಓ, ನರೇಗಾ, ಗ್ರಾಮ ಪಂಚಾಯತ್ ಅಧಿಕಾರಿ ಸಿಬ್ಬಂದಿಗಳು ಅವಶ್ಯಕ ಪೂರ್ವಸಿದ್ದತಾ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ತಾಲೂಕಿನ ಮುಖ್ಯ ರಸ್ತೆಯಲ್ಲಿ ಮಾನವ ಸರಪಳಿ ಹಾದು ಹೋಗುವಾಗ ವಾಹನ ದಟ್ಟಣೆ ಬಗ್ಗೆ ಗಮನಹರಿಸಿ ವಿದ್ಯಾರ್ಥಿಗಳ ಸುರಕ್ಷತೆ ಕಡೆ ಗಮನ ವಹಿಸಿ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನಿರ್ವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಯಾವುದೇ ಲೋಪವಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಮಾನವ ಸರಪಳಿ ಕಾರ್ಯಕ್ರಮದಲ್ಲಿ ಯುವಕರು ಉತ್ಸಾಹದಿಂದ ಪಾಲ್ಗೊಂಡು ಮಾನವ ಸರಪಳಿಯ ಪ್ರಾರಂಭ ಮತ್ತು ಅಂತ್ಯ ಸ್ಥಳವನ್ನು ಗುರುತಿಸಬೇಕು ಎಂದು ಸೂಚಿಸಿದರು.

ಪ್ರತಿ ಕಿಲೋಮೀಟರ್ ಅನ್ನು ಬಣ್ಣ ಹಚ್ಚಿ ಗುರುತು ಮಾಡಿಕೊಂಡು 2 ಕಿ.ಮೀ, 1ಕಿ.ಮೀ ಮತ್ತು 100 ಮೀಟರ್ ಗೆ ಒಬ್ಬರಂತೆ ನೂಡಲ್ ಅಧಿಕಾರಿಯನ್ನು ಪೂರ್ವಯೋಜನೆ ತಯಾರಿಸಿಕೊಳ್ಳಬೇಕು‌ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಅವರು ಮಾತನಾಡಿ, ಗ್ರಾಮ ಮತ್ತು ತಾಲೂಕಗಳಲ್ಲಿರುವ ವಿವಿಧ ಸಂಘಟನೆಗಳ ಮತ್ತು ಸ್ವ ಸಹಾಯ ಗುಂಪುಗಳ ಜೊತೆ ಸಭೆ ನಡೆಸಿ ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಸದಸ್ಯರು, ಪದಾಧಿಕಾರಿಗಳು, ಮತ್ತು ಸಾರ್ವಜನಿಕರನ್ನು ಸೇರಿಸಬೇಕು ಮತ್ತು ಮಾನವ ಸರಪಳಿಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಸುರಕ್ಷತೆ ಕಡೆ ಗಮನ ನೀಡಿ, ಮಕ್ಕಳನ್ನು ಕರೆ ತರುವ ಮತ್ತು ಕಳಿಸುವ ಕೆಲಸ ಸರಿಯಾಗಿ ಆಗಬೇಕು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎಂ ಬಿ ಸಂಕದ ಅವರು ಮಾತನಾಡಿ, ಪೊಲೀಸ್ ಇಲಾಖೆಯ ಪಿ ಎಸ್ ಐ, ಡಿ ವಾಯ್ ಎಸ್ ಪಿ ಮತ್ತು ಸಂಚಾರಿ ಪೊಲೀಸ್ ಗಳು ಕಾರ್ಯನಿವಹಿಸಿ ಮಾನವ ಸರಪಳಿಗೆ ಸಂಪೂರ್ಣ ಬಂದೂಬಸ್ತ್ ಒದಗಿಸಲಾಗುವುದು ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಮಾತನಾಡಿ, ಮಾನವ ಸರಪಳಿಯ ಕಾರ್ಯಕ್ರಮದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಎಲ್ಲಾ ಅಧಿಕಾರಿಗಳು, ಸಿಬ್ಬಂದಿ, ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡಿಕೊಂಡಿಕೊಳ್ಳಲು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದುಕಮ್ಮನವರ, ಜಿ.ಪಂ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಎಲ್ ಬಾರಟಕ್ಕಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ, ವಿವಿಧ ತಾಲೂಕಿನ ತಹಶಿಲ್ದಾರರು ತಹಶಿಲ್ದಾರರು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಪ್ರಮುಖ ಅಂಶಗಳು

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ರಾಜ್ಯ ಸೇರಿದಂತೆ ಜಿಲ್ಲೆಯ ಗಡಿ ಪ್ರದೇಶದಲ್ಲಿ ಏಕ ಕಾಲಕ್ಕೆ ಮಾನವ ಸರಪಳಿ ಆಯೋಜನೆ

ಸಪ್ಟೆಂಬರ್ 15 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲೆಯ ಗಡಿ ಪ್ರದೇಶದಲ್ಲಿ ಮಾನವ ಸರಪಳಿ ರಚನೆ ನಂತರ ಸಂವಿಧಾನ ಪೀಠಕೆ ಓದಿ ರಾಷ್ಟ್ರ ಗೀತೆಯೊಂದಿಗೆ ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿಗೆ ಸೂಚನೆ

ಜಿಲ್ಲೆಯ ಲಕ್ಷ್ಮೇಶ್ವರ ಶಿರಹಟ್ಟಿ ಮುಂಡರಗಿ ಜಿಲ್ಲಾ ಗಡಿ ವ್ಯಾಪ್ತಿಯ 61 ಕಿಲೋಮೀಟರ್ ಮಾನವ ಸರಪಳಿ ಆಯೋಜನೆ

ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಮಾನವ ಸರಪಳಿ ಆಯೋಜನೆ ಜಾಗೃತಿಗಾಗಿ ಕಾರ್ಯಕ್ರಮಕ್ಕೂ ಮುನ್ನ ಶಾಲಾ ಮಕ್ಕಳಿಂದ ಪ್ರಭಾತಪೇರಿ ಆಯೋಜನೆ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ