16 C
New York
Thursday, May 15, 2025

Buy now

spot_img

ಗದಗ : ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ಗದಗ ಜಿಲ್ಲಾದ್ಯಂತ ಸಂಚಾರ

87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ

ಗದಗ ಸೆಪ್ಟೆಂಬರ್ 27 : 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೊತಿ ಹೊತ್ತ ಕನ್ನಡ ರಥಯಾತ್ರೆಯು ಜಿಲ್ಲಾದ್ಯಂತೆ ಸೆಪ್ಟೆಂಬರ್ 28 ರಿಂದ 29 ರವರೆಗೆ ಸಂಚರಿಸಲಿದೆ.

ಸೆಪ್ಟೆಂಬರ್ 28 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲೆಯ ಲಕ್ಷೆö್ಮÃಶ್ವರ ಕ್ಕೆ ಆಗಮಿಸಲಿದೆ. ಅಲ್ಲಿಂದ ಗೊಜನೂರ ಮಾಗಡಿ ಮಾರ್ಗವಾಗಿ ಶಿರಹಟ್ಟಿಗೆ ಮಧ್ಯಾಹ್ನ 11.30 ಗಂಟೆಗೆ ಆಗಮಿಸಲಿದೆ. ಛಬ್ಬಿ- ದೇವಿಹಾಳ- ಬೆಳ್ಲಟ್ಟಿ- ಬಾಗೇವಾಡಿ- ಕಲಕೇರಿ ಮಾರ್ಗವಾಗಿ ಮಧ್ಯಾಹ್ನ 2 ಗಂಟೆಗೆ ಮುಂಡರಗಿಗೆ ಆಗಮಿಸಲಿದೆ. ಮೇವುಂಡಿ- ಕದಾಂಪುರ- ಅಡವಿಸೋಮಾಪುರ ಮಾರ್ಗವಾಗಿ ಸಂಜೆ 4 ಗಂಟೆಗೆ ಗದುಗಿಗೆ ಆಗಮಿಸಿ ವಾಸ್ತವ್ಯ ಮಾಡಲಿದೆ.

ರಥಯಾತ್ರೆಯು ಬೆಟಗೇರಿ- ನರೇಗಲ್- ನಿಡಗುಂದಿ ಮಾರ್ಗವಾಗಿ ಹೊರಟು ಸೆಪ್ಟೆಂಬರ್ 29 ರಂದು ಬೆ 11 ಗಂಟೆಗೆ ಗಜೇಂದ್ರಗಡಕ್ಕೆ ಆಗಮಿಸಲಿದೆ. ಅಲ್ಲಿಂದ ರಾಜುರ- ಸೂಡಿ- ಮಾರ್ಗವಾಗಿ ಮಧ್ಯಾಹ್ನ 1.30 ಗಂಟೆಗೆ ರೋಣಕ್ಕೆ ಆಗಮಿಸಲಿದೆ. ಅಲ್ಲಿಂದ ಚಿಕ್ಕಮಣ್ಣೂರು ಕ್ರಾಸ್ – ಮಲ್ಲಾಪುರ- ಬೆಳವಣಕಿ-ಯಾವಗಲ್ ಮಾರ್ಗವಾಗಿ ಸಂಜೆ 5 ಗಂಟೆಗೆ ನರಗುಂದಕ್ಕೆ ಆಗಮಿಸಿ ಕಲಕೇರಿ- ಅಮರಗೋಳ ಕ್ರಾಸ್ ಮಾರ್ಗವಾಗಿ ಧಾರವಾಡ ಜಿಲ್ಲೆ ನವಲಗುಂದಕ್ಕೆ ಪ್ರಯಾಣಿಸಲಿದೆ.

ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಯು ಜಿಲ್ಲೆಯಲ್ಲಿ ಸಂಚರಿಸುವ ಸಂದರ್ಭದಲ್ಲಿ ಎಲ್ಲತಹಶೀಲ್ದಾರರೊಂದಿಗೆ ಹಾಗೂ ಗದಗ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತ ಅಧ್ಯಕ್ಷರೊಂದಿಗೆ ಸಮನ್ವಯ ಸಾಧಿಸಿ ರಥಯಾತ್ರೆಯನ್ನು ಯಶಸ್ವಿಗೊಳಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಮನ್ವಯಾಧಿಕಾರಿಯಾಗಿ ನಿಯೊಜಿಸಿದೆ ಎಂದು ಗದಗ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಆನ್‌ಲೈನ್ ಮೂಲಕ ಐ.ಟಿ.ಐ ಪ್ರವೇಶಕ್ಕೆ ಅರ್ಜಿ ಆಹ್ವಾನ ಗದಗ : ಗಂಜೇಂದ್ರಗಡದಲ್ಲಿ  ಬೀದಿನಾಯಿಗಳ ದಾಳಿಗೆ  ಮಹಿಳೆ ಸಾವು.! ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ !