ಗದಗ : ಸರ್ವೇಯರ್ ಲೈಸನ್ಸ್ ರೀನವಲ್ ಮಾಡಲು ಲಂಚ ಪಡೆಯುತ್ತಿದ್ದ ಅಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ಗದಗ ನಗರದಲ್ಲಿ ನಡೆದಿದೆ.
ರೋಣ ತಾಲ್ಲೂಕು ಭೂಮಾಪನಾ ಇಲಾಖೆಯ ಸಹಾಯಕ ನಿರ್ದೇಶಕ (ಎಡಿಎಲ್ಆರ್) ವಿ,ಗೀರಿಶ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಅಧಿಕಾರಿ ಎನ್ನಲಾಗಿದೆ.
ಗಜೇಂದ್ರಗಡ ತಾಲ್ಲೂಕಿನ ನೀರಲಕೇರಿ ಗ್ರಾಮದ ಅರುಣ್ ಕುಮಾರ್ ಎಂಬುವರು ಸರ್ವೇಯರ್ ಲೈಸನ್ಸ್ ರೀನವಲ್ ಮಾಡಲು ವಿ ಗೀರಿಶ ಬಳಿ ಹೋದಾಗ ₹25 ಸಾವಿರ ಲಂಚ ಕೊಡುವಂತೆ ಕೇಳಿದ್ದರು.
ಈ ಹಿನ್ನೆಲೆ ಅರುಣ್ ಕುಮಾರ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಅಧಿಕಾರಿ ವಿ ಗಿರೀಶ್ ಅವರು ಭಾನುವಾರ ರಾತ್ರಿ ಗದಗ ನಗರದ ಸಾಯಿಬಾಬ ಗುಡಿಯ ಸಮೀಪ ₹25 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಡಿವೈಎಸ್ಪಿ ವಿಜಯ್ ಬಿರಾದಾರ್ ನೇತೃತ್ವದ ತಂಡ ದಾಳಿ ನಡೆಸಿ ಆಧಿಕಾರಿ ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.