18.2 C
New York
Saturday, June 28, 2025

Buy now

spot_img

ಗದಗ : ನವೆಂಬರ್ 15 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕ ಅಹವಾಲು ಸ್ವೀಕಾರ

ಗದಗ  ನವೆಂಬರ್ 8: ಅಪರ ಪೊಲೀಸ್ ಮಹಾ ನಿರ್ದೇಶಕರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಇವರ ನಿರ್ದೇಶನದಂತೆ ಕರ್ನಾಟಕ ಲೋಕಾಯುಕ್ತ, ಗದಗ ಕಛೇರಿಯ ಪೊಲೀಸ್ ಅಧಿಕಾರಿಗಳು ನವೆಂಬರ್ 15 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ “ಪುರಸಭೆ ಗಜೇಂದ್ರಗಡದಲ್ಲಿ” ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಏರ್ಪಡಿಸಿದ್ದಾರೆ. ಸದರಿ ದಿನಾಂಕದಂದು ಸಾರ್ವಜನಿಕರಿಂದ ದೂರು/ಅಹವಾಲುಗಳನ್ನು ಸ್ವೀಕರಿಸಲಾಗುವುದು.

ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು, ಅಹವಾಲುಗಳನ್ನು ಹಾಗೂ ತಮ್ಮ ಸರಕಾರಿ ಕೆಲಸಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ವಿಳಂಬ ಮಾಡುತ್ತಿರುವ ಬಗ್ಗೆ ಲಿಖಿತ ದೂರನ್ನು ದಾಖಲಿಸಬಹುದು. ಸರಕಾರಿ ಅಧಿಕಾರಿಗಳು ಸರಕಾರದ ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಉದ್ದೇಶ ಪೂರ್ವಕ ತಾರತಮ್ಯ ಮಾಡುತ್ತಿರುವ ಬಗ್ಗೆ ಲಿಖಿತ ದೂರನ್ನು ದಾಖಲಿಸಬಹುದಾಗಿದೆ.

ಸರಕಾರದ ಯೋಜನೆಗಳ ಅನುಷ್ಟಾನದಲ್ಲಿ ಅನಗತ್ಯ ವಿಳಂಬ, ಕಳಪೆ ಕಾಮಗಾರಿ ನಡೆಸಿ ಹಣ ದುರುಪಯೋಗ ಪಡಿಸಿದ ದೂರುಗಳ ಬಗ್ಗೆ ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿಗದಿತ ಸಮಯದೊಳಗೆ ಮಾಡಿಕೊಡದೆ, ಅಕ್ರಮ ಸಂಭಾವನೆ (ಲಂಚದ ಹಣ)ಯ ಸಲುವಾಗಿ ಅನಗತ್ಯ ವಿಳಂಬ ಮಾಡುತ್ತಿದ್ದರೆ ಲಿಖಿತ ದೂರವನ್ನು ದಾಖಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಗದಗ ಆರಕ್ಷಕ ಉಪ ಅಧೀಕ್ಷಕರಾದ ವಿಜಯ ಬಿರಾದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news