14.4 C
New York
Friday, May 9, 2025

Buy now

spot_img

ಗದಗ : ರಾಷ್ಟ್ರ ಮಟ್ಟದಲ್ಲಿ ಚಿನ್ನದ ಪದಕ ಪಡೆದ.ಕು. ನಿಖಿಲರಡ್ಡಿಗೆ ಸಚಿವರಿಂದ ಸನ್ಮಾನ

ಗದಗ  ಡಿಸೆಂಬರ್ 26: ಗದಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿಯಾದ ಕು. ನಿಖಿಲರಡ್ಡಿ ನಿಂಗರಡ್ಡಿ ತೇರಿನಗಡ್ಡಿ ಇವರು ದಿನಾಂಕ: 07-12-2024 ರಿಂದ 10-12-2024 ರವರೆಗೆ ಓಡಿಸ್ಸಾ ರಾಜ್ಯದ ಪುರಿಯಲ್ಲಿ ನಡೆದ 29ನೇ ರಾಷ್ಟಿçÃಯ ರೋಡ ಸೈಕ್ಲಿಂಗ್ ಚಾಂಪಿಯನ್ ಶಿಪ್ ನಲ್ಲಿ ಟೀಮ್ ಟೈಮ್ ಟ್ರಾಯಲ್. ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದಿರುತ್ತಾರೆ.

 ದಿನಾಂಕ: 10-11-2024 ರಿಂದ 14-11-2024 ರವರೆಗೆ ಬೆಂಗಳೂರಿನಲ್ಲಿ ನಡೆದ ಮಿನಿ ಒಲಂಪಿಕ್ ರೋಡ ಸೈಕ್ಲಿಂಗ್ ಸ್ಪರ್ಧೆ ಇಂಡಿವಿಜುವಲ್ ಟೈಮ್ ಟ್ರಾಯಲ್.ಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದಿರುತ್ತಾರೆ. ಹಾಗೂ ರೋಡ್ ರೇಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿರುತ್ತಾರೆ. ರಾಜ್ಯ ಮಟ್ಟದ 15ನೇ ರೋಡ ಸೈಕ್ಲಿಂಗ್ ಚಾಂಪಿಯನ್ಶಿಫ್ನಲ್ಲಿ 15 ಕಿ.ಮೀ.ಇಂಡಿವಿಜುವಲ್ ಟೈಮ್ ಟ್ರಾಯಲ್ಸ÷್ನಲ್ಲಿ ಭಾಗವಹಿಸಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಗಳಿಸಿರುತ್ತಾರೆ.

ರಾಜ್ಯ ಮಟ್ಟದ 3ನೇ ಮಿನಿ ಓಲಂಪಿಕ್ ರೋಡ ಸೈಕ್ಲಿಂಗ್ 10 ಕಿಮೀ ಟಿ.,ಟಿ. ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿರುತ್ತಾರೆ. ರಾಷ್ಟç ಮಟ್ಟದ 29ನೇ ರೋಡ ಸೈಕ್ಲಿಂಗ್ ಚಾಂಪಿಯನ್ಶಿಪ್ನಲ್ಲಿ 20 ಕಿಮೀ ಟೀಮ್ ಟೈಮ್ ಟ್ರಾಯಲ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿರುತ್ತಾರೆ. ದಿನಾಂಕ: 28-12-2024 ರಿಂದ 29-12-2024 ರವರೆಗೆ ಬೆಂಗಳೂರಿನಲ್ಲಿ ಜರುಗುವ ರಾಜ್ಯ ಮಟ್ಟದ ಎಂ.ಟಿ.ಬಿ. ಸೈಕ್ಲಿಂಗ್ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ದಿನಾಂಕ: 31-12-2024 ಮತ್ತು 01-01-2025 ರಂದು ವಿಜಯಪುರದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಕೂಲ್ ಗೇಮ್ಸ್ ರೋಡ ಸೈಕ್ಲಿಂಗ್ ಮತ್ತು ಟ್ರಾ÷್ಯಕ್ ಸೈಕ್ಲಿಂಗ್ ಸ್ಪರ್ಧೆಗೆ ಆಯ್ಕೆಯಾಗಿ ಕು. ನಿಖಿಲರಡ್ಡಿ ನಿಂಗರಡ್ಡಿ ತೇರಿನಗಡ್ಡಿ ಇವರು ಗದಗ ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ. ಸದರಿಯವರಿಗೆ ಹಾಗೂ ತರಬೇತುದಾರರಾದ ನಿಂಗರಡ್ಡಿ ತೇರಿನಗಡ್ಡಿ ಇವರಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋಧ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಎಚ್. ಕೆ. ಪಾಟೀಲ, ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ: ಶರಣು ಗೋಗೇರಿ, ಹಾಗೂ ಕ್ರೀಡಾ ಇಲಾಖೆಯ ಎಲ್ಲಾ ತರಬೇತುದಾರರು ಅಭಿನಂದನೆ ಸಲ್ಲಿಸಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ