15.7 C
New York
Friday, May 9, 2025

Buy now

spot_img

ಗದಗ : ವಿವಿಧ ಅರ್ಜಿಗಳ ಆಹ್ವಾನ

ಅರ್ಜಿ ಆಹ್ವಾನ

ಗದಗ ಫೆಬ್ರುವರಿ 6 : ಸಫಾಯಿ ಕರ್ಮಚಾರಿಗಳ ನಿಯೋಜನೆ ನಿಷೇಧ ಹಾಗೂ ಪುನರ್ ವಸತಿ ಕಾಯ್ದೆ ಅನ್ವಯ ಉಪವಿಭಾಗ ಮಟ್ಟದ ಸಮಿತಿ ರಚಿಸಲು ಸಫಾಯಿ ಕರ್ಮಚಾರಿಗಳ ಪುನರ್ ವಸತಿಗಾಗಿ ಕೆಲಸ ಮಾಡುತ್ತಿರುವ ಸಂಘಟನೆಗಳಿಗೆ ಸೇರಿದ ಅಥವಾ ಉಪವಿಭಾಗದಲ್ಲಿ ವಾಸಿಸುತ್ತಿರುವ ಸಮುದಾಯವನ್ನು ಪ್ರತಿನಿಧಿಸುವ ಇಬ್ಬರು ಸಾಮಾಜಿಕ ಕಾರ್ಯಕರ್ತರು (ಕಡ್ಡಾಯವಾಗಿ ಒಬ್ಬ ಮಹಿಳೆ ನೇಮಕ ಮಾಡುವುದು) ಅಧೀಕಾರೇತರ ಸದಸ್ಯರನ್ನಾಗಿ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 ಆಸ್ತಕರು ನಿಗಧಿತ ನಮೂನೆಯಲ್ಲಿ ಫೆಬ್ರುವರಿ 20 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿಗಳನ್ನು ಗದಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ, ಕಛೇರಿಯಿಂದ ಪಡೆಯಬಹುದಾಗಿದೆ ಎಂದು ಉಪವಿಭಾಗಾಧಿಕಾರಿಗಳು ಪ್ರಕಟಣೆ ನೀಡಿದ್ದಾರೆ

ಅರ್ಜಿ ಆಹ್ವಾನ

ಗದಗ ಫೆಬ್ರುವರಿ6 : ಅಪೇರಲ್ ಟ್ರೇನಿಂಗ್ ಅಂಡ್ ಡಿಸೈನ್ ಸೆಂಟರ್,ಕೌಶಲ್ಯ ವಿಕಾಸ ಮತ್ತು ಉದ್ಯಮಶೀಲತಾ ಮಂತ್ರಾಲಯ ಇವರ ಸಹಭಾಗಿತ್ವದಲ್ಲಿ Pಒಏಗಿಙ 4.0 ಯೋಜನೆಯಡಿ ಎಲ್ಲ ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳಾದ 6 ತಿಂಗಳ (570 ಗಂಟೆಗಳ) ಅವಧಿಯ ಫ್ಯಾಷನ್ ಡಿಸೈನರ್ ಉಚಿತ ಹೊಲಿಗೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

 ಅರ್ಜಿ ಸಲ್ಲಿಸುವವರು ಗದಗ ಜಿಲ್ಲೆಯ ನಿವಾಸಿಯಾಗಿರಬೇಕು, 20 ರಿಂದ 40 ವಯೋಮಾನದವರಾಗಿರಬೇಕು, ಕನಿಷ್ಠ 12ನೇ ತರಗತಿ/ಐಟಿಐ/ಡಿಪ್ಲೋಮಾ ಪಾಸಾಗಿರಬೇಕು. ಎಲ್ಲ ಹಿಂದುಳಿದ ವರ್ಗಕ್ಕೆ ಸೇರಿದ ಮೇಲಿನ ಅರ್ಹತೆಯನ್ನು ಹೊಂದಿರುವ ಆಸಕ್ತ ಅಭ್ಯರ್ಥಿಗಳು ಅಪೇರಲ್ ಟ್ರೇನಿಂಗ್ ಅಂಡ್ ಡಿಸೈನ್ ಸೆಂಟರ್ (ಎ.ಟಿ.ಡಿ.ಸಿ) 1ನೇ ಮಹಡಿ, ಕುಷ್ಟಗಿ ಬಿಲ್ಡಿಂಗ್, ಪಾಲಾ ಬದಾಮಿ ರಸ್ತೆ ಬೆಟಗೇರಿ-ಗದಗ,

 ಈ ವಿಳಾಸಕ್ಕೆ ತಿಳಿಸಲಾದ (ದೃಢೀಕೃತ) ದಾಖಲಾತಿಗಳ 4 ಪ್ರತಿಗಳೊಂದಿಗೆ ಹಾಗು ಇತ್ತೀಚಿನ 6 ಭಾವಚಿತ್ರದೊಂದಿಗೆ ಫೆಬ್ರುವರಿ 22 ಒಳಗೆ ಸಂಪರ್ಕಿಸಿ ನಿಗದಿತ ನಮೂನೆಯಲ್ಲಿ ಖುದ್ದಾಗಿ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9844236030/ 9606640980 ಸಂಪರ್ಕಿಸಬಹುದು.

ಒನ್ ಕೇಂದ್ರಕ್ಕೆ ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನ

ಗದಗ : ಜಿಲ್ಲೆಯ ಮುಂಡರಗಿ ತಾಲ್ಲೂಕಿನಲ್ಲಿ ಖಾಲಿ ಇರುವ ಶಿವಾಜಿನಗರ ಗ್ರಾಮ ಪಂಚಾಯತಿಯ ಗ್ರಾಮ ಒನ್ ಕೇಂದ್ರಕ್ಕೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ದಿನಾಂಕ: 15-02-2025 ರೊಳಗಾಗಿ ಅರ್ಜಿಗಳನ್ನು https://www.karnatakaone.gov.in/Public/GramOneFranchiseeTerms ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಗಳು, ಗದಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ ಗದಗ : ಭೋವಿ ಸಮಾಜದ ಹೆಮ್ಮೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾವತಿ ಟಿ ಬಿಸನಳ್ಳಿ ಗೆ ಗೌರವ ಡಾಕ್ಟರೇಟ್ ಪದವಿ