13.1 C
New York
Tuesday, October 14, 2025

Buy now

spot_img

ಗದಗ : ಗ್ರಾಮಾಭಿವೃದ್ಧಿಗೆ ಕೆಳಹಂತದ ವಾರ್ಷಿಕ ಯೋಜನೆ ಅತ್ಯಂತ ಸಹಕಾರಿ : ಡಾ.‌ ಯತೀಂದ್ರ ಸಿದ್ಧರಾಮಯ್ಯ

ಗದಗ : ಗ್ರಾಮಾಭಿವೃದ್ಧಿಗೆ ಕೆಳ ಹಂತದ ವಾರ್ಷಿಕ ಯೋಜನೆಗಳು ಅತ್ಯಂತ ಸಹಕಾರಿಯಾಗಿವೆ. ವಿಕೇಂದ್ರೀಕರಣ ವ್ಯವಸ್ಥೆಯಿಂದ ಹಾಗೂ ಸರಿಯಾದ ಯೋಜನೆಗಳಿಂದ ಮಹತ್ತರ ಅಭಿವೃದ್ಧಿ ಸಾಧನೆ ಸಾಧ್ಯ ಎಂದು ವಿಧಾನ ಪರಿಷತ್ ಶಾಸಕ ಡಾ.‌ ಯತೀಂದ್ರ ಸಿದ್ಧರಾಮಯ್ಯ ಅವರು ಅಭಿಪ್ರಾಯ ಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಆಡಿಟೊರಿಯಂ ಹಾಲ್ ನಲ್ಲಿ ಶನಿವಾರ ಆಯೋಜಿಸಲಾದ ಕೆಳಹಂತದ ಯೋಜನೆಗಳೊಂದಿಗೆ ವಾರ್ಷಿಕ ಜಿಲ್ಲಾ ಅಭಿವೃದ್ಧಿ ಯೋಜನೆಯನ್ನು ತಯಾರಿಸುವ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಸಂತ ರಾಜಕಾರಣಿ, ಮಾಜಿ ಶಾಸಕರಾದ ಡಿ ಆರ್ ಪಾಟೀಲ ಅವರು ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಅಪಾರ ಅನುಭವ ಹಾಗೂ ಅಭಿವೃದ್ಧಿ ಮುಂದಾಲೋಚನೆ ಉಳ್ಳವರಾಗಿದ್ದರಿಂದ ನನ್ನ ತಂದೆಯವರಾದ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದಾರಾಮಯ್ಯ ಅವರು ಡಿ ಆರ್ ಪಾಟೀಲ ಅವರನ್ನು ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದರು.

ಡಿ ಆರ್ ಪಾಟೀಲ ಅವರ ಅಪಾರ ಅನುಭವದಿಂದ ವಿಕೇಂದ್ರೀಕರಣ ವ್ಯವಸ್ಥೆ ಹಾಗೂ ಯೋಜನೆ ತಯಾರಿಕೆ ಕರಡು ಪ್ರತಿ ಇಗಾಗಲೇ ಗದಗ ಜಿಲ್ಲೆಯಲ್ಲಿ ಸಿದ್ದವಾಗಿದೆ. ಇದೇ ತರಹ ಮೈಸೂರಲ್ಲಿ ಸಹ ಅಭಿವೃದ್ಧಿ ಯೋಜನೆಯ ಕರಡು ತಯಾರಿಸಲಾಗುವುದು ಎಂದು ಹೇಳಿದರು.

ವಾರ್ಡ, ಗ್ರಾಮ ಮಟ್ಟದಲ್ಲಿ ಸಭೆ ನಡೆಸಿ ತಮ್ಮ ಗ್ರಾಮದಲ್ಲಿ ಅಗತ್ಯವಾದ ಅಭಿವೃದ್ಧಿ ಕೆಲಸಗಳ ಕುರಿತು ಯೋಜನಾ ವರದಿ ಕರಡು ಸಿದ್ದಪಡಿಸಿ, ತಾಪಂ, ಜಿಪಂ ಮೂಲಕ ಸರ್ಕಾರಕ್ಕೆ ಕಳುಹಿಸಿ ಆಧ್ಯತೆ ಆದಾರದಲ್ಲಿ ಗ್ರಾಮಗಳ ಯೋಜನೆಗಳ ಅನುಷ್ಠಾನಕ್ಕೆ ಇದು ಸಹಕಾರಿ ಆಗಲಿದೆ. ಇದೊಂದು ಉತ್ತಮ ಕಾರ್ಯವಾಗಿದೆ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಅಭಿಪ್ರಾಯ ಪಟ್ಟರು.

ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ ಆರ್ ಪಾಟೀಲ ಅವರು ಪ್ರಾಸ್ತಾವಿಕ ಮಾತನಾಡಿ, ವಿಕೇಂದ್ರೀಕರಣ ವ್ಯವಸ್ಥೆ ಗ್ರಾಮ ಮಟ್ಟದಿಂದ ಬಲವರ್ದನೆಯಾಗಬೇಕು. ಆಗ ಮಾತ್ರ ಗ್ರಾಮಗಳು ಅಭಿವೃದ್ಧಿ ಯೋಂದಿಗೆ ಆರ್ಥಿಕ ಸದೃಡತೆ ಸಾಧಿಸಲಿವೆ. ರಾಜ್ಯದ ಎಲ್ಲ ಗ್ರಾಮಗಳಲ್ಲೂ ಸಹ ವಾರ್ಷಿಕ ಅಭಿವೃದ್ಧಿ ಯೋಜನೆಗಳ ಕರಡು ಪ್ರತಿ ತಯಾರಿಸಿ ಮುಂದಿನ ಹಂತಕ್ಕೆ ಕಳುಹಿಸಿಕೊಡಬೇಕು. ಅದನ್ನು ಸಹ ನಿಗದಿಪಡಿಸಿದ ಅವದಿಯೋಳಗೆ ಪುರ್ಣವಾಗಿಸಬೇಕು ಎಂದರು.

ಕಾರ್ಯಾಗಾರದಲ್ಲಿ ಹುಬ್ಬಳ್ಳಿಯ ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಅಶೋಕ ಮಂದಾಲಿ, ಸುಜಾತ ದೊಡ್ಮನಿ, ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್, ಜಿ ಪಂ ಉಪ ಕಾರ್ಯದರ್ಶಿ ಸಿಆರ್ ಮುಂಡರಗಿ, ಎ ಎ ಕಂಬಾಳಿಮಠ, ಎಂ ವಿ ಚಳಗೇರಿ ಸೇರಿದಂತೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಓ ಗಳು ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
“ಕಲಿಯುಗದ ಕುಡುಕ” ರಾಜು ತಾಳಿಕೋಟಿ ಇನ್ನಿಲ್ಲ…. ಗದಗ  :  ನಶಾಮುಕ್ತ  ಗದಗ ಜಿಲ್ಲೆಯನ್ನು ನಿರ್ಮಿಸೋಣ: ಸಚಿವ ಎಚ್. ಕೆ. ಪಾಟೀಲ್ ಗದಗ : ಪೋಷಣ ಮಾಸಾಚರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಗದಗ : ಜಿಲ್ಲೆಯಲ್ಲಿ 123 ಪ್ರಕರಣಗಳು ಮಧ್ಯಸ್ಥಿಕೆಯಲ್ಲಿ ಇತ್ಯರ್ಥ ಗದಗ : ಕುಟುಂಬ ಕಲಹ : ಹೆಂಡತಿಯನ್ನು ಕೊಲೆಗೈದ ಗಂಡ..! ಗದಗ : ಗ್ರಾಮಾಭಿವೃದ್ಧಿಗೆ ಕೆಳಹಂತದ ವಾರ್ಷಿಕ ಯೋಜನೆ ಅತ್ಯಂತ ಸಹಕಾರಿ : ಡಾ.‌ ಯತೀಂದ್ರ ಸಿದ್ಧರಾಮಯ್ಯ ಗದಗ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರಿಂದ ಅರ್ಥಪೂರ್ಣ ದಸರಾ ಆಚರಣೆ ಗದಗ : ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಗದಗ : ಅಲ್ಪಸಂಖ್ಯಾತರ ಇಲಾಖಾ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಿ : ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯು ಆಶ್ರಮದ ಶಾಲೆಯಂತಿದೆ : ಪರಮಪೂಜ್ಯ ಮೃಡಗಿರಿಯ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶ...