Monday, September 16, 2024
Google search engine
Homeಗದಗಗದಗ : ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ಅಣುಕು ಪ್ರದರ್ಶನ

ಗದಗ : ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ಅಣುಕು ಪ್ರದರ್ಶನ

ಗದಗ ಜುಲೈ 12: ಮುಂಗಾರು ಹಂಗಾಮಿನ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಅತೀವೃಷ್ಟಿಯಿಂದ ಪ್ರವಾಹ ಸಂಭವಿಸಿದಾಗ ಉಂಟಾಗುವ ಸಂಕಷ್ಟದಿಂದ ಪಾರಾಗುವ ವಿಧಾನವನ್ನು ಜಿಲ್ಲಾ ಮಟ್ಟದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದವರು ಅಣುಕು ಪ್ರದರ್ಶನ ಪ್ರಸ್ತುತಪಡಿಸಿ ಜಾಗೃತಿ ಮೂಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.

ನಗರದ ಭೀಷ್ಮಕೆರೆ ಆವರಣದಲ್ಲಿ ಜಿಲ್ಲಾಡಳಿತ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದೊಂದಿಗೆ ಆಯೋಜಿಸಲಾದ ಅಣುಕು ಪ್ರದರ್ಶನ ವೀಕ್ಷಿಸಿ ಅವರು ಮಾತನಾಡಿದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದೊಂದಿಗೆ ಜಿಲ್ಲಾ ಮಟ್ಟದ ವಿವಿಧ ತಂಡಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರನ್ನು (ಸಾರ್ವಜನಿಕರನ್ನು) ಪಾರು ಮಾಡುವುದಲ್ಲದೇ ತುರ್ತು ಪರಿಸ್ಥಿತಿಗನುಸಾರವಾಗಿ ಅವರ ಆರೋಗ್ಯ ರಕ್ಷಣೆಯ ಕಾರ್ಯಾಚರಣೆಗೂ ಕೂಡ ಮುಂದಾಗಲಿವೆ ಎಂದರು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ (ಎನ್‍ಡಿಆರ್‍ಎಫ್ ) ಮುಖ್ಯಸ್ಥರಾದ ಇನ್ಸ ಪೆಕ್ಟರ್ ಗೋಪಾಲ ಕೃಷ್ಣ ಅವರು ಮಾತನಾಡಿ ಪ್ರವಾಹ ಸಂದರ್ಭ ಉಂಟಾದಾಗ ನಾಗರೀಕರ ಪ್ರಾಣ ರಕ್ಷಣೆಗಾಗಿ ನಮ್ಮ ತಂಡವು ಸದಾ ಸನ್ನದ್ಧವಾಗಿ ಕಾರ್ಯನಿರ್ವಹಿಸುತ್ತದೆ ಎಂದರು.

ಈ ಅಣುಕು ಪ್ರದರ್ಶನ ಏರ್ಪಡಿಸುವ ಮೂಲಕ ಜಿಲ್ಲೆಯಲ್ಲಿ ಅತೀವೃಷ್ಟಿ ಹಾಗೂ ಪ್ರವಾಹ ಎದುರಾದಾಗ ಸಾರ್ವಜನಿಕರ ಜೀವಹಾನಿ ತಡೆಯುವ ವಿಧಾನ ಹಾಗೂ ಆಸ್ತಿ ಸಂರಕ್ಷಣೆ ಕುರಿತು ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ವಿಪತ್ತು ನಿರ್ವಹಣಾ ತಂಡದೊಂದಿಗೆ ಸಂದಿಗ್ದ ಪರಿಸ್ಥಿತಿಯಲ್ಲಿ ಸಾರ್ವಜನಿಕರೂ ಸಹ ಸಹಕಾರ ನೀಡುವ ಮೂಲಕ ಜೀವ ಹಾನಿ ನಿಯಂತ್ರಣದಲ್ಲಿ ಕೈಜೋಡಿಸಬೇಕು ಎಂದರು.

ಈ ಅಣುಕು ಪ್ರದರ್ಶನ ವೀಕ್ಷಿಸಿದ ಜನಸಾಮಾನ್ಯರು ಎನ್‍ಡಿಆರ್‍ಎಫ್ ತಂಡದ ಮೂಲಕ ಜನರ ಜೀವ ರಕ್ಷಣೆಯಲ್ಲಿ ಇತರರಿಗೂ ತಿಳಿಸಿ ಕೊಡುವ ಮೂಲಕ ಜೀವ ಹಾನಿ ಹಾಗೂ ಆಸ್ತಿ ಹಾನಿ ತಡೆಯುವ ಉದ್ದೇಶ ಈ ಅಣುಕು ಪ್ರದರ್ಶನದ ಮೂಲ ಉದ್ದೇಶವಾಗಿದೆ ಎಂದು ಹೇಳಿದರು.

AA

ಈ ಸಂದರ್ಭದಲ್ಲಿ ತಹಶೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ವಿ.ಎಸ್.ಠಕ್ಕೇಕರ್, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ಶಿವಾನಂದ ರಾಜನಾಳ, ಎನ್.ಡಿ.ಆರ್.ಎಫ್. ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ವೋಡಾಫೋನ್, ಏರಟೆಲ್, ಜಿಯೋ ಬಿಎಸ್‍ಎನ್‍ಎಲ್ ಸೇರಿದಂತೆ ದೂರವಾಣಿ ಸಂಸ್ಥೆಯವರು, ಎನ್.ಎಸ್.ಎಸ್. ಘಟಕದವರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು ಗದಗ : ತೋಂಟದಾರ್ಯ ಅಟೋ ಸ್ಟ್ಯಾಂಡ್ ಅನ್ನಸಂತರ್ಪಣೆ ಗದಗ : ಅರ್ಥಪೂರ್ಣವಾಗಿ ಪೈಗಂಬರ್ ಜಯಂತಿ ಆಚರಣೆ : ಬಾಷಾಸಾಬ್ ಮಲ್ಲಸಮುದ್ರ ಗದಗ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ ಗದಗ : ಸೆ.17 ರಿಂದ ಗದಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ‘ದಸರಾ ಕ್ರೀಡಾಕೂಟ’ ಆಯೋಜನೆ ಗದಗ : ಗದಗ ಬೆಟಗೇರಿ ನಗರಸಭೆ : ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನ ಗದಗ : ತಂದೆ ಇಲ್ಲದ ಮಕ್ಕಳ ಖಾತೆಗೆ ಮಾತ್ರ ಸರ್ಕಾರ ವರ್ಷಕ್ಕೆ 24000 ರೂ. ಗಳ ಸುದ್ದಿಯಲ್ಲಿ ಸತ್ಯಾಂಶವಿಲ್ಲ  ಗದಗ : ಲಿಂಗ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ  ೧೪ ಪುಣ್ಯಸ್ಮರಣೆ ಆಚರಣೆ