Monday, September 16, 2024
Google search engine
Homeಉದ್ಯೋಗಗದಗ : ಅರ್ಜಿ ಆಹ್ವಾನ

ಗದಗ : ಅರ್ಜಿ ಆಹ್ವಾನ

ಗದಗ  ಜುಲೈ 22 : ರೋಣ ಪುರಸಭೆ ಕಾರ್ಯಲಯ ವತಿಯಿಂದ ಡೇ-ನಲ್ಟ್ ಯೋಜನೆಯ ಬೀದಿ ಬದಿ ವ್ಯಾಪಾರಿಗಳ ಮತ್ತು ಆತ್ಮನಿರ್ಬರ ನಿಧಿ ಯೋಜನೆಯಡಿ ಕರ್ನಾಟಕ ಬೀದಿ ಬದಿ ವ್ಯಾಪಾರ ನಿಯಮದಂತೆ ನಗರದ ಸ್ಥಳೀಯ ಸಂಸ್ಥೆಯ ಮಟ್ಟದಲ್ಲಿ ಬೀದಿ ಬದಿ ವ್ಯಾಪಾರಿಗಳ ಕುಂದುಕೋರತೆ ಪರಿಹಾರ ಸಮಿತಿಗೆ ಅಧ್ಯಕ್ಷರನ್ನು ಮತ್ತು 2  ಸದಸ್ಯರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಿದೆ.

ಸಮಿತಿಯ ಅಧ್ಯಕ್ಷರಾಗಬಯಸುವವರು ನಿವೃತ್ತ ಸಿವಿಲ್ ನ್ಯಾಯಾಧೀಶರಾಗಿರಬೇಕು ಮತ್ತು 65 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. ಹಾಗೆಯೇ ಸಮಿತಿಯ ಸದಸ್ಯರಾಗಲು ರಾಜ್ಯ ಸರ್ಕಾರದ ನಿವೃತ್ತವರ್ಗ-1 ಅಧಿಕಾರಿಯಾಗಿರಬೇಕು ಮತ್ತು 65 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. ಸ್ಥಳೀಯ ಪ್ರದೇಶದಲ್ಲಿ ಸೇವಾ ದಾಖಲೆ ಹೊಂದಿರಬೇಕು. ಪ್ರಸ್ತಾವಿತ ಸಮಿತಿಯ ಅವಧಿಯು ಬಿಡುಗಡೆಯಾದ ದಿನಾಂಕದಿಂದ 5 ವರ್ಷಗಳವರೆಗೆ ಚಲಾವಣೆಯಲ್ಲಿರುತ್ತದೆ. ಸಮಿತಿಯ ಕಾರ್ಯಾಚರಣೆಯ ಅಧಿಕಾರ ವ್ಯಾಪ್ತಿಯನ್ನು ಕಾಲ ಕಾಲಕ್ಕೆ ಸರ್ಕಾರವು ಸೂಚಿಸುತ್ತದೆ.

ಸಮಿತಿಯ ಅಧ್ಯಕ್ಷರಾಗಿ ನಿವೃತ್ತ ಸಿವಿಲ್ ನ್ಯಾಯಧೀಶರು ಅಥವಾ ಮ್ಯಾಜಿಸ್ಟ್ರೇಟ್ ಆರೆಕಾಲಿಕ ಆಧಾರದ ಮೇಲೆ ನೇಮಕಗೊಂಡರೆ ಒಂದು ಸಭೆಗೆ ರೂ 2500=00 ಹಾಗೂ ಕುಂದು ಕೊರತೆ ಪರಿಹಾರ ಸಮಿತಿಯ ಇತರೆ ಸದಸ್ಯರು ಅರೆಕಾಲಿಕ ನೇಮಕಗೊಂಡರೆ ಒಂದು ಸಭೆಗೆ ರೂ 1000=00 ಗೌರವಧನ ಪಡೆಯುತ್ತಾರೆ. ಅರ್ಜಿ ಆಹ್ವಾನ ಪ್ರಕಟಗೊಂಡ 30 ದಿನಗಳ ಒಳಗಾಗಿ ರೋಣ ಪುರಸಭೆ ಕಾರ್ಯಾಲಯದ ಡೇನಲ್ಡ್ ವಿಭಾಗದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ರೋಣ ಪುರಸಭೆ ಕಾರ್ಯಾಲಯದ ಡೇನಲ್ಡ್ ವಿಭಾಗದಲ್ಲಿ ಸಂಪರ್ಕಿಸಬಹುದಾಗಿದೆ.

ಸುದ್ದಿ – 2

ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಗದಗ ಜುಲೈ 22 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರ ( ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ) ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ 2024-25 ನೇ ಸಾಲಿನಲ್ಲಿ ಆನ್‍ಲೈನ್ ಮೂಲಕ https://shp.karnataka.gov.in ಅರ್ಜಿ ಸಲ್ಲಿಸಲು ಜುಲೈ 23 ರವರಗೆ ದಿನಾಂಕವನ್ನು ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು ಗದಗ : ತೋಂಟದಾರ್ಯ ಅಟೋ ಸ್ಟ್ಯಾಂಡ್ ಅನ್ನಸಂತರ್ಪಣೆ ಗದಗ : ಅರ್ಥಪೂರ್ಣವಾಗಿ ಪೈಗಂಬರ್ ಜಯಂತಿ ಆಚರಣೆ : ಬಾಷಾಸಾಬ್ ಮಲ್ಲಸಮುದ್ರ ಗದಗ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ ಗದಗ : ಸೆ.17 ರಿಂದ ಗದಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ‘ದಸರಾ ಕ್ರೀಡಾಕೂಟ’ ಆಯೋಜನೆ ಗದಗ : ಗದಗ ಬೆಟಗೇರಿ ನಗರಸಭೆ : ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನ ಗದಗ : ತಂದೆ ಇಲ್ಲದ ಮಕ್ಕಳ ಖಾತೆಗೆ ಮಾತ್ರ ಸರ್ಕಾರ ವರ್ಷಕ್ಕೆ 24000 ರೂ. ಗಳ ಸುದ್ದಿಯಲ್ಲಿ ಸತ್ಯಾಂಶವಿಲ್ಲ  ಗದಗ : ಲಿಂಗ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ  ೧೪ ಪುಣ್ಯಸ್ಮರಣೆ ಆಚರಣೆ