Thursday, September 19, 2024
Google search engine
Homeಉದ್ಯೋಗಗದಗ : ರೋಣ ತಾಲೂಕನ್ನು ಪ್ರಗತಿ ಪಥದಲ್ಲಿ ಕೊಂಡೊಯ್ಯಲು ನಿಮ್ಮ ಸಹಕಾರ ಅಗತ್ಯ : ಚಂದ್ರಶೇಖರ...

ಗದಗ : ರೋಣ ತಾಲೂಕನ್ನು ಪ್ರಗತಿ ಪಥದಲ್ಲಿ ಕೊಂಡೊಯ್ಯಲು ನಿಮ್ಮ ಸಹಕಾರ ಅಗತ್ಯ : ಚಂದ್ರಶೇಖರ ಕಂದಕೂರ

ಗದಗ ಅಗಷ್ಟ5 : ಗದಗ ಜಿಲ್ಲೆಯಲ್ಲಿ ರೋಣ ತಾಲೂಕ ಪ್ರಗತಿ ಹಂತದಲ್ಲಿ ಹಿಂದೆ ಉಳಿದಿದೆ ನಿಮ್ಮೆಲ್ಲರ ಸಹಕಾರದಿಂದ ತಾಲೂಕನ್ನು ಮುಂದೆ ಸಾಗಿಸೋಣ ಎಂದು ನೂತನ ನರೇಗಾ ಸಹಾಯಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ಚಂದ್ರಶೇಖರ ಬಿ ಕಂದಕೂರ ಅವರು ಅಭಿಪ್ರಾಯ ಪಟ್ಟರು.

ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ನಾನು ಕೊಪ್ಪಳ ಜಿಲ್ಲೆಯ ಕನಕಗಿರಿ ಅಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದೆ. ಸದ್ಯ ರೋಣ ತಾಲೂಕಿಗೆ ವರ್ಗಾವಣೆ ಆಗಿರುತ್ತದೆ ಇಲ್ಲಿಯ ವಾತಾವರಣ ನಮ್ಮ ವಾತಾವರಣಕ್ಕೆ ಬಹಳಷ್ಟು ವ್ಯತ್ಯಾಸ ಇರುತ್ತದೆ. ಆದರೆ ಕಲಸದ ವಿಚಾರ ಮಾತ್ರ ಎಲ್ಲೆಡೆ ಒಂದೆ ಇರುತ್ತದೆ ಎಲ್ಲರೂ ಒಗ್ಗೂಡಿ ಕೆಲಸ ಮಾಡುವದರಿಂದ ತಾಲೂಕಿನ ಪ್ರಗತಿಗೆ ಮುನ್ನಡೆ ಆಗುತ್ತದೆ. ಈ ಹಿನ್ನೆಲೆ ತಾಲೂಕಿನ ಪ್ರಗತಿ ಉತ್ತಮ ಪಡಿಸಲು ಸಿಬ್ಬಂದಿಗಳ ಸಹಾಯ, ಸಹಕಾರ ಅಗತ್ಯ ಎಂದು ಹೇಳಿದರು..

ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಕಾರ್ಯ ನಿರ್ವಾಹಕ ಅಧಿಕಾರಿ ಮಂಜುಳಾ ಹಕಾರಿ ಮಾತನಾಡಿ ತಾಲೂಕಿನ ಅಭಿವೃದ್ಧಿ ಹಾಗೂ ಪ್ರಗತಿ ಸಾಧಿಸಲು ಸಂಘಟಿತ ಪ್ರಯತ್ನ ಅತ್ಯಗತ್ಯ ಎಲ್ಲಾ ಸಿಬ್ಬಂದಿಗಳು ಸಹ ನೂತನವಾಗಿ ಆಗಮಿಸಿದ ಸಹಾಯಕ ನಿರ್ದೇಶಕರಿಗೆ ಸಹಕಾರ ನೀಡುವುದರ ಜೊತೆಗೆ ತಾಲೂಕಿನ ಪ್ರಗತಿಗೆ ಮುನ್ನುಡಿ ಬರೆಯಿರಿ ಎಂದರು.

ತಾಲೂಕ ಯೋಜನಾಧಿಕಾರಿ ಸಿ.ಎಸ್.ನಿಲಗುಂದ ಸನ್ಮಾನ ಮಾಡಿ ಬರಮಾಡಿಕೊಂಡರು, ತಾಲೂಕ ಪಂಚಾಯತ ವ್ಯವಸ್ಥಾಪಕರಾದ ದೇವರಾಜ ಸಜ್ಜನಶೆಟ್ಟರ ಪರಿಚಯಿಸಿದರು. ಅರುಣ ಸಿಂಗ್ರಿ ನಿರೂಪಿಸಿ ವಂದಿಸಿದರು. ತಾಲೂಕ ಪಂಚಾಯತ ಸಿಬ್ಬಂದಿಗಳು ಹಾಗೂ ನರೇಗಾ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯುತ್ ನಿಲುಗಡೆ ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ ಗದಗ : ಜನರ ಆರೋಗ್ಯ ಕಾಪಾಡಲು ಸ್ವಚ್ಚತೆ ನಮ್ಮ ಮೊದಲ ಕರ್ತವ್ಯ : ಕೀರ್ತಿ, ಪಾಟೀಲ್ ರೋಣ : ಗ್ರಾಮ ಸುಂದರವಾಗಿ ಕಾಣಲು ಸ್ವಚ್ಚತೆ ಮೊದಲ ಆದ್ಯತೆ ಆಗಿರಲಿ : ತಾಪಂ ಇಓ ಮಂಜುಳಾ ಹಕಾರಿ.. ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು