11.3 C
New York
Sunday, June 1, 2025

Buy now

spot_img

ಗದಗ : ಬಿಸಿಯೂಟ ಸವಿದು ಗುಣಮಟ್ಟ ಪರಿಶೀಲಿಸಿದ ಜಿಪಂ ಸಿಇಓ ಭರತ್ ಎಸ್

ಗದಗ ಅಗಷ್ಟ8 : ಗದಗ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರು ಮುಂಡರಗಿ ತಾಲೂಕಿನ ಯಕ್ಲಾಸಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಕ್ಷರ ದಾಸೋಹ ಕೊಠಡಿಗೆ ದಿಢೀರ್ ಭೇಟಿ ನೀಡಿ ಮಧ್ಯಾಹ್ನದ ಬಿಸಿಯೂಟ ಸವಿದು ಮಕ್ಕಳಿಗೆ ನೀಡುವ ಆಹಾರದ ಗುಣಮಟ್ಟ ಪರಿಶೀಲಿಸಿದರು.

ಡಂಬಳ, ಮೇವುಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಕೈಗೊಂಡಿದ್ದ ವಿವಿಧ ಕಾಮಗಾರಿಗಳ ಪರಿಶೀಲನೆಗೆ ಆಗಮಿಸಿದ್ದ ವೇಳೆ ಅವರು ವಿವಿಧ ಸರಕಾರಿ ಶಾಲೆಗಳಿಗೂ ದಿಢೀರ್ ಭೇಟಿ ನೀಡಿ ಬೋಧನಾ ಗುಣಮಟ್ಟ, ಶೌಚಾಲಯ, ಕುಡಿಯುವ ನೀರಿನ ಸೌಲಭ್ಯ, ಅಡುಗೆ ಕೋಣೆಗಳಿಗೆ ಭೇಟಿ ನೀಡಿ ಸ್ವಚ್ಛತೆಯನ್ನು ಅವಲೋಕಿಸಿದರು.

ಇದೇ ವೇಳೆ ಅಡುಗೆ ಸಿಬ್ಬಂದಿಗಳೊಂದಿಗೆ ಮಾತನಾಡಿ ಬಿಸಿಯೂಟಕ್ಕೆ ಬಳಸುವ ತರಕಾರಿ, ಮಕ್ಕಳಿಗೆ ವಿತರಿಸುವ ಶೇಂಗಾ ಚಿಕ್ಕಿ, ಮೊಟ್ಟೆ, ಬಾಳೆಹಣ್ಣಿನ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಶಾಲಾ ಮಕ್ಕಳಿಗೆ ವಿತರಿಸಲಾಗುವ ಊಟದ ಕುರಿತು ಅಕ್ಷರ ದಾಸೋಹದ ಕೊಠಡಿಗಳಿಗೆ ಭೇಟಿ ನೀಡಿ ದವಸ ಧಾನ್ಯ, ತರಕಾರಿಗಳನ್ನು ಪರೀಕ್ಷಿಸಿದರು. ಸ್ವತಃ ಅನ್ನ, ಸಾಂಬಾರ್ ಮತ್ತು ಶೇಂಗಾ ಚಿಕ್ಕಿ ಸವಿದು ಬಿಸಿಯೂಟದ ಗುಣಮಟ್ಟ ಪರಿಶೀಲಿಸಿದರು.

ಯಕ್ಲಾಸಪೂರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ದಿಢೀರ್‌ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಯನ್ನು ಪರಿಶೀಲಿಸಿದರು. ಪ್ರತಿ ತಿಂಗಳು ಕಡ್ಡಾಯವಾಗಿ ಮಕ್ಕಳು, ಬಾಣಂತಿಯರು ಹಾಗೂ ಗರ್ಭಿಣಿಯರಿಗೆ ಪೂರಕ ಪೌಷ್ಠಿಕ ಆಹಾರವನ್ನು ವಿತರಿಸುತ್ತಿರುವ ಬಗ್ಗೆ ಮಾಹಿತಿ ಪಡೆದರು. ಅನವಶ್ಯಕವಾಗಿ ಗೈರು ಹಾಜರಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.

ಯಕ್ಲಾಸಪೂರ ಗ್ರಾಮಸ್ಥರ ಮನವಿಯ ಮೇರೆಗೆ ದುಸ್ಥಿತಿಯಲ್ಲಿರುವ ಗ್ರಾಮದ ಶಾಲಾ ಆವರಣದ ಕಂಪೌಂಡ್ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಪಿಡಿಓ ಗೆ ಸೂಚಿಸಿದರು.

ಇದಕ್ಕೂ ಮೊದಲು ಭೇಟಿ ನೀಡಿದ ಮೇವುಂಡಿಯ ಸರಕಾರಿ ಕಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಕೆಲ ಹೊತ್ತು ಪ್ರಶ್ನೋತ್ತರ ನಡೆಸಿದ ಅವರು, ಮೂಲಭೂತ ಸೌಕರ್ಯ ಹಾಗೂ ಇನ್ನಿತರೆ ಸೌಲಭ್ಯಗಳ ಕುರಿತು ಪ್ರಶ್ನೆ ಕೇಳಿ ವಿದ್ಯಾರ್ಥಿಗಳಿಂದಲೇ ಉತ್ತರ ಪಡೆದರು.

ಈ ವೇಳೆ ಎಡಿಪಿಸಿ ಕಿರಣಕುಮಾರ್, ಪಿಡಿಓ ಅಕ್ಕಮಹಾದೇವಿ, ಪ್ರಧಾನ ಶಿಕ್ಷಕಿ ಟಿ. ಇಮಾಂಬಿ, ಸಿಆರ್ ಪಿ ಎನ್.ಎಂ ಕುಕನೂರ, ಗ್ರಾಪಂ ಸದಸ್ಯರು, ಶಾಲಾ ಸುಧಾರಣಾ ಸಮಿತಿ ಸದಸ್ಯರು ಹಾಗೂ ತಾಪಂ, ಗ್ರಾಪಂ ಸಿಬ್ಬಂದಿ ಇದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಲೋಕಾಯುಕ್ತ ಬಲೆಗೆ ..! ಹುಬ್ಬಳ್ಳಿ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ - ಮೂವರು ಸ್ಥಳದಲ್ಲೇ ಸಾವು ! ಗದಗ : ಶಾಲಾ ಬಸ್ ಪಲ್ಟಿ : ಚಾಲಕನಿಗೆ ಗಂಭೀರ ಗಾಯ ! ಗದಗ  :  ಜಿಲ್ಲೆಗೆ ನೂತನ DYSP ಯಾಗಿ  ಮುರ್ತುಜಾ ಖಾದ್ರಿ ನೇಮಕ ಗದಗ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು, ಲವರ್ ಜೊತೆ ಸೇರಿ ಗಂಡನನ್ನೇ ಕೊಂದ ಹೆಂಡತಿ ! ಗದಗ : SSLC' ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ.! ಗದಗ : ಬಾವಿಯಲ್ಲಿ ಶವವಾಗಿ ಪತ್ತೆಯಾದ ವ್ಯಕ್ತಿ ! ಗದಗ : ವಾಕರಸಾ ಸಂಸ್ಥೆಯಿಂದ ನಮ್ಮ ಬಸ್ ನಿಲ್ದಾಣ, ಸ್ವಚ್ಛ ನಿಲ್ದಾಣ ಸಾರ್ವಜನಿಕರ ಅಭಿಪ್ರಾಯ ಕಾರ್ಯಕ್ರಮ “ಅಮೃತ-ಸುರಭಿ ಯೋಜನೆ” ಹೈನೋದ್ಯಮದ ಅಭಿವೃದ್ಧಿಗೆ ಹೊಸ ಆಶಾಕಿರಣ ಗದಗ  : ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣುಕು ಪ್ರದರ್ಶನ ಸಹಕಾರಿ