ಗದಗ ಅಗಸ್ಟ 13 : ದಾನಗಳಲ್ಲಿಯೇ ಅಂಗಾAಗ ದಾನ ಅತ್ಯಂತ ಪವಿತ್ರವಾದದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ್ ಅವರು ಹೇಳಿದರು.
ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಐಎಂಎ, ಜಿಮ್ಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲಾಯನ್ಸ್ ಕ್ಲಬ್ ಹಾಗೂ ನಗರದ ವಿವಿಧ ಆಸ್ಪತ್ರೆಗಳ ಸಹಯೋಗದಲ್ಲಿ ವಿಶ್ವ ಅಂಗಾAಗ ದಿನಾಚರಣೆ ನಿಮಿತ್ತ ಕಾಲ್ನಡಿಗೆ ಹಾಗೂ ಸೈಕಲ್ ಜಾಥಾಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಗದಗ-ಬೆಟಗೇರಿ ಅವಳಿ ನಗರದಲ್ಲಿ ವೈದ್ಯರೆಲ್ಲರೂ ಕೂಡಿಕೊಂಡು ವಿಶ್ವ ಅಂಗಾಂಗ ದಿನ ಆಚರಿಸುವ ಮೂಲಕ ಜಾಗೃತಿ ಮೂಡಿಸುತ್ತಿರುವುದು ಸಂತಸದ ವಿಷಯ. ಅಂಗಾAಗ ದಾನ ವಿಷಯ ಕುರಿತು ಉದಾತ್ತ ಉದ್ದೇಶವನ್ನಿಟ್ಟುಕೊಂಡು ಮಾಡುತ್ತಿರುವ ನಿಮ ್ಮಶ್ರಮ ಯಶಸ್ವಿಯಾಗಲಿ ಎಂದು ಹಾರೈಸಿದರು.
ಜಿಲ್ಲೆ, ರಾಜ್ಯ ಸೇರಿ ದೇಶದಲ್ಲಿ ಅಂಗಾAಗಗಳ ಅಗತ್ಯ ಇದ್ದೇ ಇದೆ. ನಮ್ಮೆಲ್ಲರಿಗೂ ಗೊತ್ತಿದ್ದ ಹಾಗೆ ಕಳೆದ 25 ವರ್ಷಗಳ ಹಿಂದೆ ರಕ್ತದಾನಕ್ಕೂ ಕೊರತೆಯಾಗುವಂತಹ ಪರಿಸ್ಥಿತಿ ಇತ್ತು. ಸಧ್ಯ ಜನರು ಜಾಗೃತರಾಗಿದ್ದು ಇಂದು ರಕ್ತದಾನ ಶಿಬಿರ ಸೇರಿ ರಕ್ತ ಭಂಡಾರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ರಕ್ತದಾನ ಮಾಡುತ್ತಿದ್ದಾರೆ ಎಂದರು.
ರಕ್ತದಾನ ಹಾಗೆ ಅಂಗಾAಗ ದಾನ ಅತ್ಯಂತ ಪವಿತ್ರ ದಾನಗಳಲ್ಲೊಂದಾಗಿದೆ. ಅದನ್ನು ಜಾಗೃತಿಗೊಳಿಸಲು ಯುವಕರನ್ನು ಒಟ್ಟುಗೂಡಿಸಿರುವುದು ಸಂತಸದ ವಿಷಯವಾಗಿದೆ. ಇಲ್ಲಿ ಸೇರಿರುವ ಎಲ್ಲರೂ ಅಂಗಾAಗ ದಾನದ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಅಂಗಾAಗ ವೈಫಲ್ಯದಿಂದ ಬಳಲುತ್ತಿರುವವರಿಗೆ ಅಂಗಾAಗ ಜೋಡಣೆಗೆ ಅನುಕೂಲವಾಗುವಂತೆ ಅಂಗಾAಗ ದಾನಕ್ಕೆ ಪ್ರೇರೇಪಿಸುವ ಕೆಲಸವಾಗಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ತಿಳಿಸಿದರು..
ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿದ ಸಚಿವರು ವೈದ್ಯರು ಹಾಗೂ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೊಂದಿಗೆ ಕಾಲ್ನಡಿಗೆಯಲ್ಲಿ ಪಾಲ್ಗೊಂಡರು.
ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ, ಡಿಎಚ್ಒ ಡಾ. ಎಸ್.ಎಸ್. ನೀಲಗುಂದ, ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಡಾ. ಅವಿನಾಶ ಓದುಗೌಡರ ಸೇರಿ ನಗರದ ಎಲ್ಲ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು, ಅವಳಿ ನಗರದ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.